ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ನಿಶ್ಚಿತ್ ಪಿ. ಗೆ ಕಡಬದಲ್ಲಿ ಅದ್ದೂರಿ ಸ್ವಾಗತ

0

ಇತ್ತೀಚಿಗೆ ಮಧ್ಯಪ್ರದೇಶದ ದೇವದಾಸ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತರಾದ ಕೊಡಗು ಸಂಪಾಜೆ ಮೂಲದ ಕಡಬ ಸರಸ್ವತಿ ವಿದ್ಯಾಲಯದ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಚಿದ್ಗಾರು ನಿಶ್ಚಿತ್ ಪಿ. ಯವರನ್ನು ಕಡಬ ಪೇಟೆಯಲ್ಲಿ ಅದ್ದೂರಿಯಾಗಿ ಮೆರವಣಿಗೆ ಮೂಲಕ ತೆರೆದ ವಾಹನದಲ್ಲಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಸಂಚಾಲಕರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಮತ್ತು ಚಿದ್ಗಾರು ಕುಟುಂಬಸ್ಥರು ಉಪಸ್ಥಿತರಿದ್ದರು.