ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ

0

ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನ.1ರಂದು ಸ.ಪ್ರಾ.ಹಿರಿಯ. ಶಾಲೆ ಪಂಬೆತ್ತಾಡಿ ಇಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು ಮತ್ತು ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಲ. ದಿಲೀಪ್ ಬಾಬ್ಲುಬೆಟ್ಟು ವಹಿಸಿದ್ದರು . ಮುಖ್ಯ ಅತಿಥಿಯಾಗಿ ಶಾಲಾ ಸಹ ಶಿಕ್ಷಕಿ ಮಮತ ಭಾಗವಹಿಸಿದ್ದರು . ಅತಿಥಿಗಳಾಗಿ ಲಯನ್ಸ್ ಕ್ಲಬ್ ನ ಪೂರ್ವಧ್ಯಕ್ಷ ಲ. ಸುರೇಶ್ ಕುಮಾರ್ ನಡ್ಕ ಇವರು ಮಕ್ಕಳಿಗೆ ಕಾರ್ಯಕ್ರಮದ ಮಹತ್ವ ತಿಳಿಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ಲಯನ್ಸ್ ಕಾರ್ಯದರ್ಶಿ ಲ. ವಾಸುದೇವ ಮೇಲ್ಪಾಡಿ ವಂದಿಸಿದರು. ಈ ಕಾರ್ಯಕ್ರಮ ದಲ್ಲಿ ಲಯನ್ಸ್ ಸದಸ್ಯರು, SDMC ಸದಸ್ಯರು ಹಾಗೂ ಶಿಕ್ಷಕರು ಭಾಗವಹಿಸಿದ್ದರು…