ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪರಿವಾರ ದೈವೀ ಶಕ್ತಿಗಳ ಸಾನಿಧ್ಯದ ಬಗ್ಗೆ ಪ್ರಶ್ನಾ ಚಿಂತನೆ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ದೇವಾಲಯದ ಪರಿವಾರ ದೈವೀ ಶಕ್ತಿಗಳ ಸಾನಿಧ್ಯದ ಬಗ್ಗೆ ಪ್ರಶ್ನಾ ಚಿಂತನೆಯು ಜ್ಯೋತಿಷ್ಯರಾದ ಉಣ್ಣಿಕೃಷ್ಣನ್ ಅವರ ನೇತೃತ್ವದಲ್ಲಿ ನ.7ರಂದು ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಮೊಕ್ತೇಸರ ಗುರುರಾಜ ಭಟ್ ಅಡ್ಕಾರು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ , ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ, ನ.ಸೀತಾರಾಮ, ಶರತ್ ಅಡ್ಕಾರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.