ಸುಳ್ಯ ಪ್ರೆಸ್ ಕ್ಲಬ್ಬಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

0

ದ.ಕ. ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್‌ರವರು ನ.೧೧ರಂದು ಅಪರಾಹ್ನ ಸುಳ್ಯದ ಅಂಬಟೆಡ್ಕದಲ್ಲಿರುವ ಪ್ರೆಸ್ ಕ್ಲಬ್‌ಗೆ ಭೇಟಿ ನೀಡಿದರು. ಆ ಸಂದರ್ಭ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಮತ್ತು ಪದಾಧಿಕಾರಿಗಳು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರಲ್ಲದೆ, ಶಾಲು ಹಾರ ಅರ್ಪಿಸಿ ಗೌರವಿಸಿದರು.


ಪ್ರೆಸ್ ಕ್ಲಬ್ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ನೆರವಿನ ಬಗ್ಗೆ ಹರೀಶ್ ಬಂಟ್ವಾಳ್ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ವಿವರಿಸಿದ ನಂತರ ಮಾತನಾಡಿದ ನಳಿನ್ ಕುಮಾರ್ ಕಟೀಲ್‌ರವರು, ಪ್ರೆಸ್ ಕ್ಲಬ್ ಕಟ್ಟಡದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಇನ್ನು ನಿರ್ಮಾಣಗೊಳ್ಳಲಿರುವ ಸಭಾಂಗಣ ಮತ್ತು ಗ್ರಂಥಾಲಯಕ್ಕೆ ನೆರವು ಕೊಡಿಸಲು ಸಹಕರಿಸುವುದಾಗಿ ಹೇಳಿದರು.
ಪ್ರೆಸ್ ಕ್ಲಬ್ ಉಪಾಧ್ಯಕ್ಷ ಜೆ.ಕೆ.ರೈ ಸ್ವಾಗತಿಸಿ, ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೆಟ್ಟಿ ವಂದಿಸಿದರು. ಹಿರಿಯರಾದ ಗಂಗಾಧರ ಮಟ್ಟಿ ಮತ್ತು ಪ್ರೆಸ್ ಕ್ಲಬ್ ನಿರ್ದೇಶಕರು, ಶಾಸಕಿ ಕು.ಭಾಗೀರಥಿ ಮುರುಳ್ಯ, ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ನ.ಪಂ. ಮಾಜಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಹಿರಿಯ ನಾಯಕರಾದ ಎಸ್.ಎನ್.ಮನ್ಮಥ ಹಾಗೂ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ರಾಕೇಶ್ ಕೆಡೆಂಜಿ, ಸುಭೋದ್ ಶೆಟ್ಟಿ ಮೇನಾಲ, ಮಹೇಶ ಮೇನಾಲ, ಸುನಿಲ್ ಕೇರ್ಪಳ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ರೇಣುಕಾರಾಧ್ಯ ಮೊದಲಾದವರು ಉಪಸ್ಥಿತರಿದ್ದರು.