ಬೆಳ್ಳಾರೆ ಕೆಪಿಎಸ್ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನ.9 ಮತ್ತು ನ.10 ರಂದು ನಡೆದ ಶಾಲಾ ಶಿಕ್ಷಣ ಇಲಾಖೆಯ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಬೆಳ್ಳಾರೆ ಕೆಪಿಎಸ್ ನ ವಿದ್ಯಾರ್ಥಿಗಳಾದ ಕಿಶನ್ ದ್ರಾವಿಡ್ , ಹೇಮಂತ್ ಕೆ.ವಿ., ಧ್ಯಾನ್ ರೈ ಹಾಗೂ ರಾಜೇಶ್ ಇವರನ್ನೊಳಗೊಂಡ ದ.ಕ. ಜಿಲ್ಲಾ ತಂಡ ಪ್ರಥಮ ಸ್ಥಾನ ಪಡೆದಿರುತ್ತದೆ.

ನವೆಂಬರ್ 24 ಮತ್ತು 25 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಹೇಮಂತ್ ಕೆ.ವಿ. ಹಾಗೂ ಕಿಶನ್ ದ್ರಾವಿಡ್ ಆಯ್ಕೆಯಾಗಿರುತ್ತಾರೆ. ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಿಶನ್ ದ್ರಾವಿಡ್ ಅತ್ಯುತ್ತಮ ಪ್ರದರ್ಶನ ನೀಡಿ ಉತ್ತಮ ದಾಳಿಗಾರ ಪ್ರಶಸ್ತಿಯನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.