ಎನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಲಕ್ಷ್ಮೀ ಪೂಜೆ

0

ಎನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದೀಪಾವಳಿಯ ಪ್ರಯುಕ್ತ ನ. 12ರಂದು ಮಹಾ ಗಣಪತಿ ಹೋಮ ಮತ್ತು ಲಕ್ಷ್ಮಿ ಪೂಜೆ ನಡೆಯಿತು. ಏನಕಲ್ಲು ಶಂಕಪಾಲ ಸುಬ್ರಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರು ಪೂಜಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಂಘದ ಅಧ್ಯಕ್ಷ ಭವಾನಿ ಶಂಕರ್ ಪೋಂಬಾಡಿ, ಉಪಾಧ್ಯಕ್ಷ ಭರತ್ ನೆಕ್ರಾಜೆ ಮತ್ತು ನಿರ್ದೇಶಕರು, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರತನ್ ಕಲ್ಕುದಿ ಮತ್ತು ಸಿಬ್ಬಂದಿ ವರ್ಗ ಹಾಗೂ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು‌.