ಸಂಪಾಜೆ: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 22ನೇ ನೂತನ ಶಾಖಾ ಕಛೇರಿ ಉದ್ಘಾಟನೆ

0

ಶಾಸಕ ಎ.ಎಸ್. ಪೊನ್ನಣ್ಣ, ಮಾಜಿ ಶಾಸಕ ಕೆ.ಜಿ. ಬೋಪಯ್ಯ ಸೇರಿದಂತೆ ಗಣ್ಯರ ಉಪಸ್ಥಿತಿ

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಮಡಿಕೇರಿ ಇದರ 22ನೇ ನೂತನ ಸಂಪಾಜೆ ಶಾಖೆಯನ್ನು ನ.15ರಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ದೀಪಬೆಳಗಿಸಿ, ನಾಮಫಲಕ ಅನಾವರಣಗೊಳಿಸಿ, ಉದ್ಘಾಟಿಸಿದರು.

ಭದ್ರತಾ ಕೊಠಡಿಯನ್ನು ಮಾಜಿ ಶಾಸಕ ಕೆ.ಜಿ‌. ಬೋಪಯ್ಯ ಅವರು ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಅವರ ಅನುಪಸ್ಥಿತಿಯಲ್ಲಿ ಪೆರಾಜೆ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರು ಉದ್ಘಾಟಿಸಿದರು.
ಸಹಕಾರ ರತ್ನ ಪುರಸ್ಕೃತ , ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ಅವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಎಸ್. ಹರೀಶ್ ಪೂವಯ್ಯ , ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಅನಂತ್ ಎನ್.ಸಿ., ಪೆರಾಜೆ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಸೇರಿದಂತೆ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.