ಸೌಜನ್ಯಳ ನ್ಯಾಯಕ್ಕಾಗಿ ಪ್ರತಿಭಟನಾ ಸಭೆಗೆ ಸಿದ್ಧವಾಗುತ್ತಿರುವ ಉಬರಡ್ಕ

0

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕದಲ್ಲಿ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಯವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆಯು ನ.20 ರಂದು ನಡೆಯಲಿದ್ದು, ಊರವರು ಸೇರಿಕೊಂಡು ಜೆಸಿಬಿ ಮೂಲಕ ಸಮತಟ್ಟು ಮಾಡಿ ಶ್ರಮದಾನದ ಮೂಲಕ ಬೃಹತ್ ವೇದಿಕೆ ಸಿದ್ಧಪಡಿಸುತಿದ್ದಾರೆ.

ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ತುಳು ಜಾನಪದ ವಾಗ್ಮಿ ತಮ್ಮಣ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ, ಸೌಜನ್ಯಳ ತಾಯಿ ಕುಸುಮಾವತಿ, ನಿವೃತ್ತ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟನವರ್, ನ್ಯಾಯವಾದಿ ಮೋಹಿತ್ ಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ