ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹ

0

ಕರ್ನಾಟಕ ಸರ್ಕಾರ,ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಬೆಳ್ಳಾರೆ ಇದರ ಆಶ್ರಯದಲ್ಲಿ ಜ್ಞಾನ ದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆ ಬೆಳ್ಳಾರೆ ಇವರ ಸಹಕಾರದೊಂದಿಗೆ ಗ್ರಂಥಾಲಯ ಸಪ್ತಾಹ 2ನೇ ದಿನವಾದ ನ.15 ರಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿ.ಕೃ.ಗೋಕಾಕ್ ಹಾಗೂ ರಾಷ್ಟ್ರಕವಿ ಜಿ. ಎಸ್.ಶಿವರುದ್ರಪ್ಪ ಇವರ ಸಾಹಿತ್ಯಿಕ ಕೊಡುಗೆಗಳ ಬಗ್ಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿಯ ಕನ್ನಡ ಭಾಷಾ ಶಿಕ್ಷಕಿ ಶಮೀಮ್ ಇವರು ಉಪನ್ಯಾಸ ನೀಡಿದರು .

ಈ ಕಾರ್ಯಕ್ರಮದಲ್ಲಿ ಜ್ಞಾನ ದೀಪ ವಿದ್ಯಾಸಂಸ್ಥೆಯ ನರ್ಸರಿ ಟೀಚರ್ಸ್ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಚ್ಚುತ ಅಟ್ಲೂರು ಮತ್ತು ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ತಿರುಮಲೇಶ್ವರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ ಸಂಜಯ್ ನೆಟ್ಟಾರು ಸ್ವಾಗತಿಸಿ , ಶಕೀಲಾ ವೈ ಶೆಟ್ಟಿ ಧನ್ಯವಾದ ಸಲ್ಲಿಸಿದರು . ಗ್ರಂಥಾಲಯ ಮೇಲ್ವಿಚಾರಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.