ನ.25: ಕನಕಮಜಲಿನಲ್ಲಿ ರಾಷ್ಟ್ರೀಯ ನೃತ್ಯೋತ್ಸವ ಮೂರ್ಜೆ ಮುತ್ತಣ್ಣ ಗೌಡ ಮತ್ತು ಶ್ರೀಮತಿ ನಳಿನಿ ಮುತ್ತಣ್ಣ ಸ್ಮಾರಕ ಮೇದಿ‌ನಿ ಉತ್ಸವ

0

ಶ್ರೀ ಗುರುದೇವ ಲಲಿತಕಲಾ ಅಕಾಡೆಮಿ ವತಿಯಿಂದ ರಾಷ್ಟ್ರೀಯ ನೃತ್ಯೋತ್ಸವ, ಮೂರ್ಜೆ ಮುತ್ತಣ್ಣ ಗೌಡ ಮತ್ತು ಶ್ರೀಮತಿ ನಳಿನಿ ಮುತ್ತಣ್ಣ ಸ್ಮಾರಕ ಮೇದಿನಿ ಉತ್ಸವವು ಕನಕಮಜಲಿನ ಕನಕಕಲಾ ಗ್ರಾಮದ ಗುರುದೇವ ನಿಲಯದಲ್ಲಿ ನ.25ರಂದು ಜರುಗಲಿದೆ.

ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ನೃತ್ಯ ಕಲಾವಿದರಿಂದ ವಿವಿಧ ನೃತ್ಯ ಪ್ರದರ್ಶನ ನಡೆಯಲಿದ್ದು, ಶ್ರೀ ಗುರುದೇವ ಲಲಿತಕಲಾ ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕರಾದ ರಾಧಾಕೃಷ್ಣ ಮೂರ್ಜೆ, ನಿರ್ದೇಶಕಿ ಶ್ರೀಮತಿ ಚೇತನಾ ರಾಧಾಕೃಷ್ಣ ಮೂರ್ಜೆ ಸೇರಿದಂತೆ ಮೂರ್ಜೆ ಕುಟುಂಬಸ್ಥರು ಹಾಗೂ ಕಲಾಸಕ್ತರು ಉಪಸ್ಥಿತರಿರಲಿದ್ದಾರೆ.