ಕೊಳ್ತಿಗೆ : ತಾಳೆ ಮರದಿಂದ ಬಿದ್ದು ಮೃತ್ಯು

0

ಕೊಳ್ತಿಗೆ ಗ್ರಾಮದ ಪಾಂಬಾರು ಜಯಂತ ಪೂಜಾರಿ ಎಂಬವರು ತಾಳೆ ಮರದಿಂದ ಬಿದ್ದು ಮೃತಪಟ್ಟ ಘಟನೆ ನ.18 ರಂದು ನಡೆದಿದೆ.
ಮರದಿಂದ ಬಿದ್ದು ಗಾಯಗೊಂಡ ಇವರನ್ನು ಕೂಡಲೇ ಆಂಬ್ಯುಲೆನ್ಸ್ ಮುಖಾಂತರ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದರೆಂದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಇವರಿಗೆ 53 ವರ್ಷ ಪ್ರಾಯವಾಗಿದ್ದು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.