ಅರಂತೋಡು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಅರಂತೋಡು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ನ.18ರಂದು ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ದಯಾಶ್ರೀಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ನಿವ್ರತ್ತ ಶಿಕ್ಷಕಿ ಗಂಗಮ್ಮ ಭಾರತದ ಪ್ರಥಮ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮಕ್ಕಳಲ್ಲಿ ಸ್ವಚ್ಚತೆ, ಆರೋಗ್ಯ ಮತ್ತು ಪೌಷ್ಠಿಕ ಆಹಾರದ ಬಗ್ಗೆ ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ಚಂದ್ರಕಲಾ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪುಟಾಣಿ ಮಕ್ಕಳಿಗೆ ಬಹುಮಾನವನ್ನು ಅಂಗನಾವಾಡಿ ಬಾಲವಿಕಾಸ ಸಮಿತಿ ಸದಸ್ಯ ಅಶ್ರಪ್ ಗುಂಡಿ ವಿತರಿಸಿದರು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳ ಪೋಷಕರು, ಆರೋಗ್ಯ ಸಹಾಯಕಿ ಪುಷ್ಪಾ, ಆಶಾಕಾರ್ಯಕರ್ತೆ ತಿರುಮಲೇಶ್ವರಿ ಉಳುವಾರು, ಗ್ರಂಥಪಾಲಕಿ ವೀಣಾ ಗಿರೀಶ್ ಅಡ್ಪಂಗಾಯ ಮೊದಲಾದವರು ಭಾಗವಹಿಸಿದರು. ಅಂಗನವಾಡಿ ಕಾರ್ಯುಕರ್ತೆ ಹೊನ್ನಮ್ಮ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.