ಕಳಂಜ ಬಾಳಿಲ‌ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಮುಗುಪ್ಪು ಕೂಸಪ್ಪ ಗೌಡರಿಗೆ ಕರ್ನಾಟಕ ಸಾಧಕ ರತ್ನ ಪ್ರಶಸ್ತಿ

0

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡರಿಗೆ ಕರ್ನಾಟಕ ಸಾಧಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನ. 18ರಂದು ಧಾರವಾಡದಲ್ಲಿ ನಡೆಯಿತು. ಗೋಕಾಕದ ನಾಡಿನ ಸಮಾಚಾರ ಸೇವಾ ಸಂಘ ಹಾಗೂ ನಾಡಿನ ಸಮಾಚಾರ ದಿನ ಪತ್ರಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕೊಡ ಮಾಡುವ ರಾಜ್ಯ ಮಟ್ಟದ ಪ್ರಶಸ್ತಿ ಇದಾಗಿದ್ದು, ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್
ಸಾಂಸ್ಕೃತಿಕ ಭವನದಲ್ಲಿ ಪ್ರಶಸ್ತಿ ಪದಾನ ಸಮಾರಂಭ ನಡೆಯಿತು. ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ನಾಲ್ಗುತ್ತು, ನಿರ್ದೇಶಕರುಗಳಾದ ವಿಶ್ವನಾಥ ಪರವ ಬಾಳಿಲ, ಶುಭಕರ ಬಾಳೆಗುಡ್ಡೆ, ಮಾಜಿ ನಿರ್ದೇಶಕ ರುಕ್ಮಯ ಗೌಡ ಕಳಂಜ, ಸ್ಥಳೀಯರಾದ ವೆಂಕಟ್ರಮಣ ಗೌಡ ಕಜೆಮೂಲೆ, ಪದ್ಮಯ್ಯ ಗೌಡ ಕಡಬ ಮತ್ತು ಸುರೇಶ್ ಇಂದ್ರಾಜೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.