ಚೊಕ್ಕಾಡಿ ರಾಮ ದೇವಾಲಯದಲ್ಲಿ ತಾಲೂಕು ಮಟ್ಟದ ಭಜನೋತ್ಸವದ ಸಮಾಲೋಚನಾ ಸಭೆ

0

ಅಮರಪಡ್ನೂರಿನ ಚೊಕ್ಕಾಡಿ ಶ್ರೀ ರಾಮ ದೇವಾಲಯದ ದೇಸಿ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ತಾಲೂಕು ಭಜನಾ ಪರಿಷತ್, ಭಜನೋತ್ಸವ ಸಮಿತಿ ದೊಡ್ಡತೋಟ ವಲಯ ಹಾಗೂ ತಾಲೂಕಿನ ಭಜನಾ ಮಂಡಳಿಯ ಆಶ್ರಯದಲ್ಲಿ ನ.26 ರಂದು ನಡೆಯಲಿರುವ ಭಜನೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಭಜನೋತ್ಸವ ಸಮಿತಿ ಅಧ್ಯಕ್ಷ ನಾರಾಯಣ ಕೋಡ್ತುಗುಳಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಭಜನೋತ್ಸವ ಕಾರ್ಯಕ್ರಮದ ಪೂರ್ವ ರೂಪು ರೇಷೆಗಳ ಕುರಿತು ಜವಬ್ದಾರಿ ವಹಿಸಿಕೊಡಲಾಯಿತು. ಮೆರವಣಿಗೆಯು ಸಮಯಕ್ಕೆ ಸರಿಯಾಗಿ ಪ್ರಾರಂಭಿಸುವುದಾಗಿ ತೀರ್ಮಾನಿಸಲಾಯಿತು. ತಾಲೂಕಿನ ಎಲ್ಲಾ ಭಜನಾ ಮಂಡಳಿಯನ್ನು ಸಂಪರ್ಕಿಸುವಂತೆ ವಲಯವಾರು ಸಂಚಾಲಕರಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಪರಿಷತ್ ಅಧ್ಯಕ್ಷ ಯತೀಶ್ ರೈ ದುಗಲಡ್ಕ, ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಕಾರ್ಯದರ್ಶಿ ಕೃಷ್ಣಪ್ಪ, ಕೋಶಾಧಿಕಾರಿ ಮಹೇಶ್ ಮೇರ್ಕಜೆ, ಪಂಚಾಯತ್ ಉಪಾಧ್ಯಕ್ಷೆ ಭುವನೇಶ್ವರಿ ಪದವು, ನಿರ್ದೇಶಕ ದಯಾನಂದ ಕೊರತ್ತೋಡಿ,ವಲಯ ಸಂಚಾಲಕ ನಾರಾಯಣ ಕಳಂಜ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಚಾಲಕರು ಮತ್ತು ಸದಸ್ಯರು, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.