ಜಯನಗರ ಜೇನುಗೂಡು ಸ್ವಯಂ ಸೇವಕ ಸಂಘದ ಸದಸ್ಯರಿಂದ ಕೊಡಗಿನ ತಡಿಯಂಡಮೋಳ್ ಬೆಟ್ಟ ಚಾರಣ

0

ಜಯನಗರ ಜೇನುಗೂಡು ಸ್ವಯಂಸೇವಕರ ಸಂಘದ ಸದಸ್ಯರಿಂದ ಕೊಡಗಿನ ಕಕ್ಕಬೆ ಪರಿಸರದಲ್ಲಿರುವ ತಡಿಯಂಡ ಮೊಳ್ ಬೆಟ್ಟಕ್ಕೆ ಒಂದು ದಿನದ ಚಾರಣ ಕಾರ್ಯಕ್ರಮ ನವಂಬರ್ 27ರಂದು ಹಮ್ಮಿಕೊಳ್ಳಲಾಗಿತ್ತು. ಈ ಸಂಘಟನೆಯು ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಳೆಗಾಲದ ಸಂದರ್ಭದಲ್ಲಿ ಸ್ಥಳೀಯ ಪರಿಸರಗಳಲ್ಲಿ ಹಣ್ಣು ಹಂಪಲುಗಳ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮವನ್ನು ನಡೆಸುತ್ತಿದೆ. ಪರಿಸರ ಪ್ರೇಮವನ್ನು ಹೆಚ್ಚಿಸಿಕೊಳ್ಳಲು ಮತ್ತು ಕೊಡಗಿನ ಬೆಟ್ಟ ಗುಡ್ಡ ಪರಿಸರಗಳನ್ನು ಸಂದರ್ಶಿಸಲು ಈ ಚಾರಣವನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಸಂಘದ ಸದಸ್ಯರು ತಿಳಿಸಿದ್ದಾರೆ. ಈ ಚಾರಣದಲ್ಲಿ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದ್ದರು. ಅಲ್ಲದೆ ಈ ಚಾರಣದಲ್ಲಿ ಸಂಘದ ಸದಸ್ಯರ ಕುಟುಂಬದ ಮಹಿಳೆಯರು ಮತ್ತು ಸಣ್ಣ ಮಕ್ಕಳು ಭಾಗವಹಿಸಿದ್ದು ವಿಶೇಷವಾಗಿತ್ತು.