ಅಡ್ಕಾರು ಶ್ರೀ ಅಯ್ಯಪ್ಪ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ವತಿಯಿಂದ ಅಯ್ಯಪ್ಪ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವ ಆಮಂತ್ರಣ ಪತ್ರಿಕೆಯನ್ನು ನ‌.29ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಬೆಳಿಗ್ಗೆ ಅಯ್ಯಪ್ಪ ಮಂದಿರದಲ್ಲಿ ಪ್ರಾರ್ಥನೆ ನೆರವೇರಿಸಿ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಿಯಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಣ ನಾರಾಯಣ ಮಡಿವಾಳ ಅಡ್ಕಾರು, ಅಧ್ಯಕ್ಷ ಅಶೋಕ ಅಡ್ಕಾರು, ಪ್ರಧಾನ ಕಾರ್ಯದರ್ಶಿ ಮನು ಎನ್. ಪದವು, ಕೋಶಾಧಿಕಾರಿ ದಾಮೋದರ ಎ.ಎಸ್. ಅಡ್ಕಾರುಪದವು, ಉಪಾಧ್ಯಕ್ಷರುಗಳಾದ ಪುರುಷೋತ್ತಮ ಕಾಮತ್ ಅಡ್ಕಾರು, ರಾಜೇಶ್ (ಮಣಿ) ಪದವು, ಜೊತೆ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಪ್ರಸಾದ್ ಅಡ್ಕಾರು, ಚಂದ್ರಶೇಖರ ಎ.ಎಸ್. ಗುರುಸ್ವಾಮಿ ಚಂದ್ರಶೇಖರ ಅಡ್ಕಾರು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ದಿನೇಶ್ ಅಡ್ಕಾರು, ಸುಖೇಶ್ ಅಡ್ಕಾರು ಸೇರಿದಂತೆ ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು, ಅಯ್ಯಪ್ಪ ವೃತಧಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.