ಬೇಂಗಮಲೆಯಲ್ಲಿ ಕಸ ಎಸೆದವರಿಗೆ ಪಂಚಾಯತ್ ನಿಂದ ದಂಡ

0

ಕಸ ಎಸೆದವರಿಂದಲೇ ತ್ಯಾಜ್ಯ ವಿಲೇವಾರಿಗೊಳಿಸಿದ ಪಂಚಾಯತ್

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿ ಅಬ್ದುಲ್ ಅಜೀಜ್ ಎಂಬವರಿಗೆ ಪಂಚಾಯತ್ ರೂ 3000.00 ದಂಡ ವಿಧಿಸಿದ ಘಟನೆ ನಡೆದಿದೆ.


ನ.25 ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ತ್ಯಾಜ್ಯ ಎಸೆದ ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ ತ್ಯಾಜ್ಯ ಎಸೆದ ವ್ಯಕ್ತಿಯನ್ನು ಪತ್ತೆ ಹಚ್ಚಿ ದಂಡ ಪಾವತಿಸಲು ಸೂಚಿಸಿದಾಗ ತ್ಯಾಜ್ಯ ಎಸೆದ ವ್ಯಕ್ತಿ ದಂಡ ಪಾವತಿಸಲು ನಿರಾಕರಿಸಿದರು.
ನಂತರ ಬೆಳ್ಳಾರೆ ಪೋಲಿಸ್ ಠಾಣಾ ಸಿಬ್ಬಂಧಿಗಳು ಹಾಗೂ ಠಾಣಾಧಿಕಾರಿಗಳ ಸಹಕಾರದೊಂದಿಗೆ ನ.29 ರಂದು ತ್ಯಾಜ್ಯ ಎಸೆದ ವ್ಯಕ್ತಿಯನ್ನು ಗ್ರಾಮ ಪಂಚಾಯತ್ ಕಛೇರಿಗೆ ಕರೆಸಿ ರೂ 3000.00 ದಂಡ ವಿಧಿಸಿ ತ್ಯಾಜ್ಯ ಎಸೆದವರಿಂದಲೇ ತ್ಯಾಜ್ಯವನ್ನು ವಿಲೇವಾರಿಗೊಳಿಸಲಾಯಿತು ಎಂದು ತಿಳಿದು ಬಂದಿದೆ.