ವಾಣಿಜ್ಯ ಉಪನ್ಯಾಸಕರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಗೌತಮ್ ಕಾಮತ್ ಆಯ್ಕೆ

0

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪದವಿ ಪೂರ್ವ ಶಿಕ್ಷಣ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ವಾಣಿಜ್ಯ ಉಪನ್ಯಾಸಕರ ಸಂಘದ 2023-24 ನೇ ಸಾಲಿನ ನೂತನ ಕಾರ್ಯದರ್ಶಿಯಾಗಿ ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಳ್ಯದ ಗೌತಮ್ ಕೆ ಕಾಮತ್ ಕುಂಭಕ್ಕೋಡು ಆಯ್ಕೆಯಾಗಿದ್ದಾರೆ.

ನ.29 ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ಆಯೋಜಿಸಲಾದ ಒಂದು ದಿನದ ಕಾರ್ಯಗಾರದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.