ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯ : ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

0

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ 2023-2024 ನೇ ಸಾಲಿನ ಪ್ರಥಮ ಬಿ.ಎ.ಎಂ.ಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ನ. 30ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಸಮಾರಂಭವನ್ನು ಉದ್ಘಾಟಿಸಿ, ಆಯುರ್ವೇದ ಅತ್ಯಂತ ಹೆಚ್ಚು ಜನಪ್ರಿಯತೆ ಗಳಿಸಿದ್ದು, ವಿಶ್ವದಾದ್ಯಂತ ಆಯುರ್ವೇದ ಔಷಧ ಮತ್ತು ವೈದ್ಯರಿಗೆ ಮಾನ್ಯತೆ ಇದೆ. ಇಂದಿನ ಆಧುನಿಕ ಯುಗದಲ್ಲಿ ಪ್ರಾಚೀನ ಮತ್ತು ನವೀನ ವೈದ್ಯಕೀಯ ಪದ್ಧತಿಗಳನ್ನು ಸಮಯೋಚಿತವಾಗಿ ಬಳಸಿಕೊಂಡು ರೋಗಿಗಳ ಕ್ಷೇಮಕ್ಕಾಗಿ ಇರುವ ವಿಪುಲ ಅವಕಾಶಗಳು ಹಾಗೂ ಈ ನಿಟ್ಟಿನಲ್ಲಿ ಸಾಗುವ ದಾರಿದೀಪದ ಹಿತವಚನವನ್ನು ತಿಳಿಸಿ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಪೊಲೀಸ್ ಇನ್ಸ್ಪೆಕ್ಟರ್, ಸಿ.ಐ.ಡಿ. ಬೆಂಗಳೂರು ಇಲ್ಲಿನ
ಬ್ರಿಜೇಶ್ ಮ್ಯಾಥ್ಯೂ ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಇರಬೇಕಾದ ಸಂಯಮ, ಶಿಸ್ತು ಮತ್ತು ದಕ್ಷತೆಯ ಅಗತ್ಯತೆಯನ್ನು ವಿವರಿಸಿ, ರ‍್ಯಾಗಿಂಗ್ ಹಾಗೂ ಮಾದಕ ದ್ರವ್ಯ ವ್ಯಸನದ ಬಗ್ಗೆ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ ಪ್ರಾಸ್ತಾವಿಕ ಮಾತುಗಳೊಂದಿಗೆ, ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಗಳನ್ನು ವಿವರಿಸಿ ವಿದ್ಯಾರ್ಥಿ ಜೀವನದ ಮಹತ್ವವನ್ನು ತಿಳಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ತ್ರೈಮಾಸಿಕ ಪತ್ರಿಕೆ “ಆಯುರ್ ನ್ಯೂಸ್-ಸಂಸ್ಕಾರವನ್ನು” ಡಾ. ಕೆ.ವಿ. ಚಿದಾನಂದ ಬಿಡುಗಡೆಗೊಳಿಸಿದರು.
ಈ ಕಾರ್ಯಕ್ರಮದಲ್ಲಿ ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಸ್ನಾತಕೋತ್ತರ ವಿದ್ಯಾರ್ಥಿ ಪ್ರತಿನಿಧಿ ಡಾ. ಓಂ. ಈರಪ್ಪ ಎಲಿಗಾರ್, ಕಾಲೇಜಿನ ವಿದಾರ್ಥಿ ಸಂಘದ ಅಧ್ಯಕ್ಷ ಆರ್ಥಿಕ್ ಕೆ. ಎಸ್., ವಿದ್ಯಾರ್ಥಿಗಳ ಹೆತ್ತವರು, ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ. ಸ್ವಾಗತಿಸಿ, ಸ್ನಾತ್ತಕೋತರ ವಿದ್ಯಾರ್ಥಿ ಪ್ರತಿನಿಧಿ ಡಾ. ಓಂ ಈರಪ್ಪ ಎಲಿಗಾರ್ ವಂದಿಸಿದರು. ವಿದ್ಯಾರ್ಥಿಗಳಾದ ಶ್ರೀವಿದ್ಯಾ, ದಿಲ್ನ ಹಾಗೂ ವಿಸ್ಮಯ ಪ್ರಾರ್ಥಿಸಿದರು. ಕುಮಾರಿ ದೀಕ್ಷಾ ಮತ್ತು ಕೃತಿಕ ಕಾರ್ಯಕ್ರಮ ನಿರೂಪಿಸಿದರು.