ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ನವೋದಯ ಸ್ವ ಸಹಾಯ ಗುಂಪಿನ ಸದಸ್ಯರಿಗೆ ಸನ್ಮಾನ

0

ತಾಲೂಕು ಸಹಕಾರಿ ಸಪ್ತಾಹದ ಪ್ರಯುಕ್ತ ಸಹಕಾರಿ ಸಂಘಗಳ ಮತ್ತು ನವೋದಯ ಗುಂಪುಗಳಿಗೆ ಆಯೋಜಿಸಿದ ತಾಲೂಕು ಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಪುತ್ತೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನವೋದಯ ಗುಂಪಿನ ಸದಸ್ಯರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಅಧ್ಯಕ್ಷ ಎಸ್.ಎನ್.ಮನ್ಮಥ,ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ,ನಿರ್ದೇಶಕರಾದ ಸತೀಶ ಎಡಮಲೆ,ಮಹೇಶ ಜಬಳೆ,ಕುಸುಮಾಧರ ಮಡ್ತಿಲ,ಸರಸ್ವತಿ ಕೆ ,ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಾಂತರಾಮ ಕಣಿಲೆಗುಂಡಿ,ನವೋದಯ ಪ್ರೇರಕ ಪ್ರಕಾಶ್ ಜಬಳೆ ಮತ್ತು ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.