ಸುಳ್ಯ ಪೊಲೀಸ್ ಠಾಣೆಯಲ್ಲಿ ಮಾನಸಿಕ ಒತ್ತಡ ನಿವಾರಣೆ ಕುರಿತು ಕಾರ್ಯಗಾರ

0

ಏನೇ ಸಮಸ್ಯೆಗಳಿದ್ದರೂ ಪರಸ್ಪರ ಮಾತನಾಡಿಕೊಳ್ಳಿ ಹಂಚಿಕೊಳ್ಳುವುದರಿಂದ ಸಮಸ್ಯೆಗಳು ಪರಿಹಾರ ಸಾಧ್ಯ: ಡಾ. ವಿನಯ ಭಟ್

ಸುಳ್ಯ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮಾನಸಿಕ ಒತ್ತಡ ನಿವಾರಣೆಯ ಕುರಿತು ಇಂದು ಕಾರ್ಯಗಾರ ನಡೆಯಿತು.


ಜಿಲ್ಲಾ ಆರೋಗ್ಯ ಸಮಾಲೋಚಕರು ಡಾ. ವಿನಯ್ ಭಟ್ ಮಾನಸಿಕ ಒತ್ತಡಕ್ಕೆ ಕಾರಣಗಳು ಮತ್ತು ಅದರ ನಿವಾರಣೆಗೆ ಅನುಸರಿಸಬೇಕಾದ ವಿಧಾನಗಳ ಕುರಿತು ಕಾರ್ಯಗಾರ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಯಾವುದೇ ಸಮಸ್ಯೆಗಳು ಇದ್ದಲ್ಲಿ ಪರಸ್ಪರ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವುದರಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ. ಪ್ರತಿ ದಿನ ಒತ್ತಡ ಬರಿತ ಜೀವನವನ್ನು ಸಾಗಿಸುವ ಸಂದರ್ಭದಲ್ಲಿ ಮನಸ್ಸಿಗೆ ಒತ್ತಡಗಳು ಹೆಚ್ಚಾಗುವುದು ಸಹಜ. ಕೆಲವು ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರುಗಳು ಕಂಡುಬರುವುದು ಸಹಜ. ಈ ಎಲ್ಲಾ ಸಮಸ್ಯೆಗಳು ಬಂದಾಗ ಬ್ರಿಟಿ ಕೆಡದೆ ಆತ್ಮ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.


ವೇದಿಕೆಯಲ್ಲಿ ಸುಳ್ಳ ಪೊಲೀಸ್ ಠಾಣಾ ಎಎಸ್ಐ ಉದಯ ಭಟ್ ಉಪಸ್ಥಿತರಿದ್ದರು.
ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಕಾರ್ಯಗಾರದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಂಡರು.