ಚೆಂಬು :ಎರಡು ದಿನಗಳ ಸ್ಕೌಟ್ಸ್ ಗೈಡ್ಸ್ ಶಿಬಿರ ಸಮಾರೋಪ

0

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸ್ಥಳೀಯ ಸಂಸ್ಥೆ ಸಂಪಾಜೆ, ಭಗತ್ ಸಿಂಗ್ ಸ್ಕೌಟ್ ದಳ, ಚೆಂಬು ಸರಕಾರಿ ಪ್ರೌಡ ಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಸ್ಕೌಟ್ ಗೈಡ್ ಶಿಬಿರವು ನ.25 ಮತ್ತು 26ರಂದು ಚೆಂಬು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಶಿಬಿರವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಯಮುನಾ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕ ಯು.ಸಿ.ದಮಯಂತಿ, ಉಪ ಸಂಘಟಕಿ ಸುಲೋಚನ, ಕುಮಾರಸ್ವಾಮಿ,ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕ ದಿನಕರ ಶೆಟ್ಟಿ, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪುಷ್ಪಕಲಾ, ಸದಸ್ಯರಾದ ಶಿವರಾಮ,ಸುಮಿತ್ರ ನಿಡಿಂಜಿ ಉಪಸ್ಥಿತರಿದ್ದರು.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ರಮೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ತರಬೇತಿ ಆಯುಕ್ತ ರಂಜಿತ್ ಸ್ವಾಗತಿಸಿ ,ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ವೀರ ಮರಣ ಹೊಂದಿದ ಕ್ಯಾಪ್ಟನ್ ಪ್ರಾಂಜಲ್ ರವರಿಗೆ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ರಾತ್ರಿ ಶಿಬಿರಾಗ್ನಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಮತ್ತು ಚೆಂಬು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

.ನ.26ರಂದು ಬೆಳಿಗ್ಗೆ ಸರ್ವಧರ್ಮ ಪ್ರಾರ್ಥನೆ ನಡೆಯಿತು. ನಂತರ ಮನರಂಜನಾ ಆಟಗಳು, ಸಾಹಸಮಯ ಕ್ರೀಡೆಗಳಲ್ಲಿ ಭಾಗವಹಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಸಿ. ಅಧ್ಯಕ್ಷ ರಮೇಶ್ ಕುಮಾರ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಚಂದ್ರ ಶೇಖರ ಹೊಸೂರ್ ,ಶಾಲಾ ಮುಖ್ಯೋಪಾಧ್ಯಾಯಿನಿ ಯಮುನಾ, ಸಂಯೋಜಕರಾದ ಕುಮಾರ ಸ್ವಾಮಿ ,ಶಿಕ್ಷಕಿ ಕಾಮಾಕ್ಷಿ,ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ದಿನಕರ ಶೆಟ್ಟಿ,ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಪುಷ್ಪಕಲ,ಶಿವರಾಮ,ಪೋಷಕರಾದ ನಾಗಪ್ಪ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಿಬಿರಾರ್ತಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಜಿಲ್ಲಾ ತರಬೇತಿ ಸಂಯೋಜಕ ರಂಜಿತ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಎರಡು ದಿನದ ಕಾರ್ಯಕ್ರಮದಲ್ಲಿ ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಧನಂಜಯ್, ಕಾರ್ಯದರ್ಶಿ ಉಷಾರಾಣಿ ಪ್ರೌಡ ಶಾಲೆಯ ಶಿಕ್ಷಕ ವೃಂದ,ಸಿಬ್ಬಂದಿ ವರ್ಗ, ಚೆಂಬು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು,ವಿಧ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದು ಸಹಕರಿಸಿದರು.