ಡಿ.15: ಅಡ್ಕಾರು ಅಯ್ಯಪ್ಪ ಮಂದಿರದಲ್ಲಿ 17ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ

0

ಭಕ್ತಿಗಾ‌ನ ಲಹರಿ – ಕುಣಿತ ಭಜನೆ – ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ವತಿಯಿಂದ ಅಯ್ಯಪ್ಪ ಮಂದಿರ 17ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಡಿ.15ರಂದು ಜರುಗಲಿದೆ.

ಪ್ರಾತ:ಕಾಲ ಗಣಪತಿ ಹವನ, ಪೂರ್ವಾಹ್ನ ಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ.

ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ನಿರಂತರವಾಗಿ ಸುಳ್ಯ ತಾಲೂಕಿನ ವಿವಿಧ ಭಜನಾ ತಂಡಗಳಿಂದ ಭಜನೆ ಜರುಗಲಿದ್ದು , ರಾತ್ರಿ ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ ಟೀಂ ತವಶ್ಯ ತಂಡದಿಂದ ಭಕ್ತಿಗಾನ ಲಹರಿ ಹಾಗೂ ಕೋನಡ್ಕಪದವಿನ ಕಾರ್ತಿಕೇಯ ಭಜನಾ ಮಂಡಳಿಯವರಿಂದ ಕುಣಿತ ಭಜನೆ ಜರುಗಲಿದೆ.


ರಾತ್ರಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೃಷಿಕ ಶ್ರೀಕಾಂತ್ ಗೋಳ್ವಲ್ಕರ್ ಅವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಅನ್ನಸಂತರ್ಪಣೆಯ ಬಳಿಕ. ಕಾಸರಗೋಡಿನ ಮಲ್ಲ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾ ಮಂಡಳಿಯವರಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ. ಡಿ.16ರಂದು ಬೆಳಿಗ್ಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ಸಂಕ್ರಮಣ ಪೂಜೆ, ಪ್ರಸಾದ ವಿತರಣೆ ಜರುಗಲಿದೆ.