ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಬ್ರಹ್ಮರಕ್ಷಸ್ಸು ಸಾನಿಧ್ಯದ ಪುನ: ಪ್ರತಿಷ್ಠೆ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಬ್ರಹ್ಮರಕ್ಷಸ್ಸು ಸಾನಿಧ್ಯದ ಪುನ: ಪ್ರತಿಷ್ಠೆ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ. 07 ರಂದು ನಡೆಯಿತು.


ಡಿ.06 ರಂದು ಸಂಜೆ ದೇವತಾ ಪ್ರಾರ್ಥನೆ,ಸ್ವಸ್ತಿ ಪುಣ್ಯಹವಾಚನ,ಸುದರ್ಶನ ಹೋಮ ನಡೆಯಿತು.
ಡಿ.07 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಬ್ರಹ್ಮರಕ್ಷಸ್ಸು ಪ್ರತಿಷ್ಠೆ,ಸಾನಿಧ್ಯ ಕಲಶ,ಮಹಾಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು, ದೇವಸ್ಥಾನದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.