ಸುಳ್ಯ ರೋಟರಿ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರ

0

ಡಾ.ಬಿ.ಆರ್. ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ಪ್ರಯುಕ್ತ, ಆದಿ ದ್ರಾವಿಡ ಯುವ ವೇದಿಕೆ ರಿ,ದ. ಕ. ಸುಳ್ಯ ತಾಲೂಕು ಸಮಿತಿ, ಮಹಿಳಾ ಸಮಿತಿ ಮತ್ತು ಗ್ರಾಮ ಸಮಿತಿ. ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ. ಜಿಲ್ಲೆ, ರೋಟರಿ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ ಸಿಟಿ, ಮತ್ತು ಇನ್ನರ್ ವೀಲ್ ಕ್ಲಬ್ ಸುಳ್ಯ ಇದರ ಆಶ್ರಯದಲ್ಲಿ, ಬೃಹತ್ ರಕ್ತ ದಾನ ಶಿಬಿರ ನಡೆಯಿತು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಸವಿತ ಗಿರೀಶ್ ನಾರ್ಕೋಡು ಕಾರ್ಯಕ್ರಮವನ್ನು ಉದ್ಘಾಟಿಸಿದರು.


ರೋಟರಿ ಕ್ಲಬ್ ಅಧ್ಯಕ್ಷ ಆನಂದ ಖಂಡಿಗ ಅಧ್ಯಕ್ಷತೆ ವಹಿಸಿದ್ದರು.
ಸುಧಾಕರ್ ರೈ ಕಾರ್ಯಕ್ರಮ ನಿರೂಪಿಸಿದರು,ಸತೀಶ್ ವಂದಿಸಿದರು.