ಸೌಜನ್ಯ ಪರ ನ್ಯಾಯಕ್ಕಾಗಿ ಗುತ್ತಿಗಾರಿನಲ್ಲಿ ಬೃಹತ್ ಪ್ರತಿಭಟನೆ

0

ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ ಸೌಜನ್ಯ ಪರ ನ್ಯಾಯಕ್ಕೆ ಆಗ್ರಹಿಸಿ ಸೌಜನ್ಯ ಹೋರಾಟ ಸಮಿತಿ ಗುತ್ತಿಗಾರು ವತಿಯಿಂದ ಬೃಹತ್ ಪ್ರತಿಭಟನಾ ಸಭೆಯು ಇಂದು ಗುತ್ತಿಗಾರಿನ ದೇವಿ ಸಿಟಿ ಕಾಂಪ್ಲೆಕ್ಸ್ ವಠಾರದಲ್ಲಿ ನಡೆಯುತ್ತಿದೆ.


.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯಳ ತಾಯಿ ಕುಸುಮಾವತಿ ಚಂದಪ್ಪ ಗೌಡ, ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ, ತುಳು ವಾಗ್ಮಿ ತಮ್ಮಣ್ಣ ಶೆಟ್ಟಿ , ನಿವೃತ್ತ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟನ್ನವರ್, ನ್ಯಾಯವಾದಿ ಮೋಹಿತ್ ಕುಮಾರ್, ಸೌಜನ್ಯ ಪರ ಹೋರಾಟದ ಜಿಲ್ಲಾ ಒಕ್ಕಲಿಗರ ವೇದಿಕೆ ಸಂಚಾಲಕ ಡಿ.ಬಿ.ಬಾಲಕೃಷ್ಣ, ಸೌಜನ್ಯ ಪರ ಹೋರಾಟ ಸಮಿತಿ ತಾಲೂಕು ಸಂಚಾಲಕ ಎನ್. ಟಿ. ವಸಂತ್, ಸುಳ್ಯ ತಾಲೂಕು ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರು, ನೀತಿ ತಂಡದ ಜಯಂತ್, ಮುಂಬೈ ಹೋರಾಟ ಸಮಿತಿಯ ಸುರೇಶ್ ಯೆಯ್ಯಾಡಿ ಮೊದಲಾದವರು ಉಪಸ್ಥಿತರಿದ್ದಾರೆ.

ಜಿಲ್ಲಾ ಸಹ ಸಂಚಾಲಕ ಕಿರಣ್ ಬುಡ್ಲೆಗುತ್ತು ಸ್ವಾಗತಿಸಿ, ಚಂದ್ರಶೇಖರ ಬಾಳುಗೋಡು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಸುರೇಶ್ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.