ಚೆಂಬು ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮದಿನಾಚರಣೆ

0

ಚೆಂಬು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಮತ್ತು ಕೊಡಗು ಸಂಪಾಜೆ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಅಭಿವೃದ್ದಿ ಸಮಿತಿಯ ಅಧ್ಯಕ್ಷ ರಮೇಶ್ ನಂಬಿಯಾರ್ ಅವರು ಅಧ್ಯಕ್ಷತೆ ವಹಿಸಿದ್ದರು.

ಸಭೆಯ ಆರಂಭದಲ್ಲಿ ಕುವೆಂಪು ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.

ವೇದಿಕೆಯಲ್ಲಿ ಕೊ.ಸಂಪಾಜೆ ಹೋಬಳಿಯ ಕ.ಸಾ. ಪ. ಅಧ್ಯಕ್ಷ ಗೋಪಾಲ ಪೆರಾಜೆ, ಶಾಲಾ ಎಸ್ ಡಿ ಎಂ ಸಿ ಸದಸ್ಯ ಚಂದ್ರಶೇಖರ ಹೊಸೂರು, ಕ.ಸಾ.ಪ. ಹೋಬಳಿ ಘಟಕದ ಕಾರ್ಯದರ್ಶಿ ಶ್ರೀಮತಿ ಸಂಗೀತ ರವಿರಾಜ್ ಉಪಸ್ಥಿತರಿದ್ದು ಸಮಯೋಚಿತವಾಗಿ ಮಾತನಾಡಿದರು.

ಶಾಲಾ ವಿದ್ಯಾರ್ಥಿಗಳಾದ ಬಿಂದು, ಪ್ರಿಯದರ್ಶಿನಿ ಮತ್ತು ರಾಷ್ಡ್ರಕವಿ ಕುವೆಂಪು ಅವರ ಬದುಕು ಬರಹಗಳ ಬಗ್ಗೆ ಪ್ರಬಂಧಗಳ ಮಂಡಿಸಿ ಕುವೆಂಪು ಅವರ ಸಾಧನೆಗಳ ಕುರಿತು ಮಾಹಿತಿ ನೀಡಿದರು.
ಶಾಲ ಶಿಕ್ಷಕ ರಂಜಿತ್ ಕೆ. ಸ್ವಾಗತಿಸಿ