ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

0

ಸುಳ್ಯ ಸೈಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ದ. ಕ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಡಿ.1 ರಂದು ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿ ನಡೆಯಿತು.
ಸುಳ್ಯ ಸೈಂಟ್ ಜೋಸೆಫ್ ಪ್ರೌಢಶಾಲಾ ವಿದ್ಯಾರ್ಥಿಗಳಾದ ಸಮನ್ಯು ಎಸ್ ಶೆಟ್ಟಿ, (10ನೇ ತರಗತಿ )ಅಭಿರಾಮ್ ಭಟ್ (9ನೇ ತರಗತಿ )ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿನಿ ಕುಮಾರಿ ಪಲ್ಲವಿ ಜೆ ಎಚ್( 5ನೇ ತರಗತಿ,,) ಕನ್ನಡ ಕವನ ವಾಚನದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ.
ಇವರಿಗೆ ಶಾಲಾ ಸಂಚಾಲಕರಾದ ಫಾದರ್ ವಿಕ್ಟರ್ ಡಿಸೋಜ ಹಾಗೂ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮರವರು ಶುಭಹಾರೈಸಿದರು.