ಮಾವಿನಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ

0

ದೇವಚಳ್ಳ ಗ್ರಾಮದ ಸ.ಹಿ.ಪ್ರಾ.ಶಾಲೆ ಮಾವಿನಕಟ್ಟೆ ಯಲ್ಲಿ ವಿವೇಕ ಶಾಲಾ ಕಟ್ಟಡ ಯೋಜನೆಯಡಿ ನಿರ್ಮಾಣ ವಾದ ನೂತನ ಕೊಠಡಿಯ ಉದ್ಘಾಟನೆಯು ಡಿ.2ರಂದು ನಡೆಯಿತು.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು| ಭಾಗೀರಥಿ ಮುರುಳ್ಯ ನೂತನ ಕೊಠಡಿಯನ್ನು ಉದ್ಘಾಟಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ., ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ನಾಮ ನಿರ್ದೇಶಿತ ಸದಸ್ಯರಾದ ದುರ್ಗಾದಾಸ್ ಮೆತ್ತಡ್ಕ, ರಾಜೇಶ್ವರಿ ಎಂ., ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಆಶಾ ಎಸ್., ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್, ಸುಳ್ಯ ತಾಲೂಕು ಪ್ರೌಢಶಾಲಾ ಶಿಕ್ಷಕರ ‌ಸಂಘದ ಅಧ್ಯಕ್ಷ ಶ್ರೀಧರ ಗೌಡ ಕೆ., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪಾರೆಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಎ.‌ಸ್ವಾಗತಿಸಿ, ಶಿಕ್ಷಕ ದಯಾನಂದ ಎಸ್. ಕಾರ್ಯಕ್ರಮ ನಿರೂಪಿಸಿದರು. ‌