ಸುಳ್ಯದಲ್ಲಿ ಅಳವಡಿಸಿದ ಅಯೋಧ್ಯೆ ರಾಮಮಂದಿರ ಬ್ಯಾನರ್ ಹರಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಿ

0

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಒತ್ತಾಯ

ಸುಳ್ಯದ ಹಿಂದೂ ಬಾಂಧವರು ಪ್ರಭು ಶ್ರೀರಾಮಚಂದ್ರನ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಕಿಡಿಗೇಡಿಗಳು ಹರಿದಿದ್ದು ತಕ್ಷಣ ಅವರನ್ನು ಪತ್ತೆಹಚ್ಚಿ ಬಂಧಿಸಿ, ಗಡಿಪಾರು ಮಾಡಬೇಕೆಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಒತ್ತಾಯಿಸಿದ್ದಾರೆ.

ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ , ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿ.ಎಂ.ಎಸ್. ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರನ್ನು ಹಿಂದೂ ಬಾಂದವರು ಅಳವಡಿಕೆ ಮಾಡಿದ್ದರು.

ಬ್ಯಾ‌ನರಿನ ಮಧ್ಯ ಭಾಗದಲ್ಲಿದ್ದ ಶ್ರೀರಾಮ ದೇವರ ಸಹಿತ ರಾಮಮಂದಿರ ಲೋಕಾರ್ಪಣೆ ವಿಷಯವನ್ನು ಕಿಡಿಗೇಡಿಗಳು ರಾತ್ರಿ ಹರಿದು ಹಾಕಿದ್ದಾರೆ.
ಹಿಂದೂಗಳ ಭಾವನೆ ಜೊತೆ ಆಟವಾಡುವ ಇಂತಹ ರಾಮವಿರೋಧಿಗಳನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಇಲ್ಲದಿದ್ದರೆ ಹಿಂದೂ ಸಮಾಜ ಹೋರಾಟಕ್ಕಿಳಿಯಬೇಕಾದಿತು ಎಂಬ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದ್ದಾರೆ.