ಬೆಳ್ಳಾರೆ ಕೆಪಿಎಸ್ ವಿದ್ಯಾರ್ಥಿಗಳು ಖೇಲೋ ಇಂಡಿಯಾ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

0

ಬೆಳ್ಳಾರೆ ಕೆ.ಪಿ.ಎಸ್ ನಲ್ಲಿ ಕ್ರೀಡಾಪಟುಗಳಿಗೆ, ಕ್ರೀಡಾಧಿಕಾರಿ ಯವರಿಗೆ ಅದ್ದೂರಿ ಸ್ವಾಗತ

ತೆಲಂಗಾಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ ಕಬಡ್ಡಿ ತಂಡವನ್ನು ಪ್ರತಿನಿಧಿಸಿರುವ ಬೆಳ್ಳಾರೆ ಕೆಪಿಎಸ್ ನ 10 ನೇ ತರಗತಿ ವಿದ್ಯಾರ್ಥಿಗಳಾದ ಕಿಶನ್ ದ್ರಾವಿಡ್ ಹಾಗೂ ಹೇಮಂತ ಕೆ. ವಿ , ದೈಹಿಕ ಶಿಕ್ಷಣ ಶಿಕ್ಷಕಿ ಹಾಗೂ ಕ್ರೀಡಾಧಿಕಾರಿಯಾದ ಶ್ರೀಮತಿ ಪುಷ್ಪಾವತಿ ಇವರನ್ನು ಬೆಳ್ಳಾರೆ ಕೆಪಿಎಸ್ ನಲ್ಲಿ ಸ್ವಾಗತಿಸಿ ಅಭಿನಂದಿಸಲಾಯಿತು.


ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಆಗಮಿಸಿದ ಇವರನ್ನು ಶಾಲಾ ಮೈದಾನದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಇವರನ್ನು ಶಾಲು ಹೊದಿಸಿ,ಹೂಗುಚ್ಛ ನೀಡಿ ಅಭಿನಂದಿಸಲಾಯಿತು.
ಶಾಲಾ ಶಿಕ್ಷಕರು,ವಿದ್ಯಾರ್ಥಿಗಳ ಪೋಷಕರು,ಹಾಗೂ ಊರವರು ಅಭಿನಂದಿಸಿದರು.


ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಶುಭಹಾರೈಸಿ ಮಾತನಾಡಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಸ್.ಜನಾರ್ಧನ,ಹಿ.ಪ್ರಾ.ಶಾಲಾ ಮುಖ್ಯಗುರು ಮಾಯಿಲಪ್ಪ,ಎಸ್.ಡಿ.ಎಂ.ಸಿ‌.ಅಧ್ಯಕ್ಷ ಶ್ರೀನಾಥ್ ರೈ ಬಾಳಿಲ,ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ ಪನ್ನೆ,ಮಣಿಕಂಠ,ದಿನೇಶ್ಚಂದ್ರ ಹೆಗ್ಡೆ, ಭವ್ಯ ರವಿಕುಮಾರ್,ಪ್ರದೀಪ್ ಕುಮಾರ್ ರೈ ಪನ್ನೆ, ಹರ್ಷ ಜೆ.ಜೋಗಿಬೆಟ್ಟು, ಪ್ರೀತಂ ರೈ ,ಮುರಳಿ ತಡಗಜೆ ,ಜಯರಾಮ ಉಮಿಕ್ಕಳ,ಓವಿನ್ ಪಿಂಟೊ,ವೀರನಾಥ ಹಾಗು ಇತರ ಗಣ್ಯರು ಉಪಸ್ಥಿತರಿದ್ದರು.


ಉಪಪ್ರಾಂಶುಪಾಲರಾದ , ಸ್ವಾಗತಿಸಿ,ವಂದಿಸಿದರು. ಶಿಕ್ಷಕ ರಾಮಚಂದ್ರ ಭಟ್ ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.