ಸುಳ್ಯಕ್ಕೆ ಅನುದಾನ ನೀಡುವಂತೆ ಕೆಪಿಸಿಸಿ ಸದಸ್ಯ ಶಂಸುದ್ದೀನ್ ರವರಿಂದ ಕ್ರೀಡಾ ಸಚಿವರಿಗೆ ಮನವಿ

0

ಕರ್ನಾಟಕ ಸರಕಾರದ ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ರವರಲ್ಲಿ ಸುಳ್ಯಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾಂಗ್ರೆಸ್ ಪಕ್ಷದ ಮುಖಂಡ ಕೆಪಿಸಿಸಿ ಸದಸ್ಯ ಸಂಶುದ್ದೀನ್ ರವರು ಮನವಿ ಮಾಡಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಾಯಕರ ಮತ್ತು ಕಾರ್ಯಕರ್ತರ ಸಭೆಗೆ ಭಾಗವಹಿಸಿದ್ದ ಸಚಿವರನ್ನು ಭೇಟಿ ಮಾಡಿದ ಅವರು ಅರಂಬೂರು ಸಮೀಪದ ಇಡ್ಡ್ಯಡ್ಕ ಸರಕಾರಿ ಪ್ರಾರ್ಥಮಿಕ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ರೂ 10 ಲಕ್ಷ ಅನುಧಾನ ಮತ್ತು ಸುಳ್ಯದಲ್ಲಿ ಅನುಷ್ಠಾನಗೊಳ್ಳಲಿರುವ ತಾಲೂಕು ಕ್ರೀಡಾಂಗಣಕ್ಕೆ ಅತೀ ಶೀಘ್ರ ಹಣವನ್ನು ಬಿಡುಗಡೆ ಮಾಡಿ ಕೆಲಸವನ್ನು ಪೊರೈಸುವ ಬಗ್ಗೆ ಮನವಿ ಮಾಡಿರುವುದಾಗಿ ಅವರು ಸುದ್ದಿಗೆ ತಿಳಿಸಿದ್ದಾರೆ.