ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜಾತ್ರೋತ್ಸವದ ಆಮಂತ್ರಣ ಬಿಡುಗಡೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ಜ.26 ರಿಂದ ಜ.28 ರವರೆಗೆ ಜಾತ್ರೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಆಡಳಿತಾಧಿಕಾರಿ ಚಂದ್ರಕಾಂತ್ ಎಮ್.ಆರ್., ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಿ.ಕೆ. ಉಮೇಶ್ ಇವರ ನೇತ್ರತ್ವದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲೋತ್ಸವ ಸಮಿತಿ ಪದಾಧಿಕಾರಿಗಳು , ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥುತರಿದ್ದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಸಂಚಾಲಕ ನವೀನ್ ಕುದ್ಪಾಜೆ, ಬ್ರಹ್ಮಕಲೋತ್ಸವ ಸಮಿತಿ ಕಾರ್ಯದರ್ಶಿ ಎ.ಟಿ.ಕುಸುಮಾಧರ, ಮಿತ್ರ ಬಳಗ ಕಾಯರ್ತೋಡಿ ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ದೇವಾಲಯದ ಮುಖ್ಯ ಅರ್ಚಕ ನೀಲಕಂಠ ವ್ಯವಸ್ಥಾಪನ ಸಮಿತಿಯ ಮಾಜಿ ಅದ್ಯಕ್ಷರು, ಸದಸ್ಯರು,ಬ್ರಹ್ಮಕಲೋತ್ಸವ ಸಮಿತಿ ಪದಾಧಿಕಾರಿಗಳು , ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಆಮಂತ್ರಣ ಪತ್ರಿಕೆಯನ್ನು ಬೈಲುವಾರು ಮತ್ತು ನಗರ ವಾರ್ಡುಗಳಲ್ಲಿ ಹಂಚಲು ವಿತರಿಸಲಾಯಿತು.