ಐವರ್ನಾಡು – ದೇರಾಜೆ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಐವರ್ನಾಡಿನಲ್ಲಿ ಬೃಹತ್ ಪ್ರತಿಭಟನೆ

0

ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿ ,ಸರಕಾರಕ್ಕೆ ಮನವಿ

ಐವರ್ನಾಡು ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಈ ರಸ್ತೆ ಕೂಡಲೇ ಅಭಿವೃದ್ಧಿಪಡಿಸಬೇಕೆಂದು ಐವರ್ನಾಡು ನಾಗರಿಕ ಸೇವಾ ಸಮಿತಿ ಮತ್ತು ಗ್ರಾಮಸ್ಥರು ಆಗ್ರಹಿಸಿ ಐವರ್ನಾಡು ಗ್ರಾ.ಪಂ.ಎದುರು ಬೃಹತ್ ಪ್ರತಿಭಟನೆ ಜ.20 ರಂದು ನಡೆಯಿತು.
ಐವರ್ನಾಡು ಮುಖ್ಯ ರಸ್ತೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ದ್ವಾರದಿಂದ ಪ್ರತಿಭಟನೆ ನಡೆಸಿ ಜನಪ್ರತಿನಿಧಿಗಳಿಗೆ ಧಿಕ್ಕಾರ ಹಾಕಲಾಯಿತು.
ಬಳಿಕ ಮುಖ್ಯ ರಸ್ತೆ ದೇವಸ್ಥಾನದ ದ್ವಾರದಿಂದ ಪ್ರತಿಭಟನೆ ನಡೆಸುತ್ತಾ ಪಂಚಾಯತ್ ಎದುರು ಬಂದ ಪ್ರತಿಭಟನಕಾರರು ಧಿಕ್ಕಾರ ಕೂಗಿದರು.


ಬಳಿಕ ಗ್ರಾ.ಪಂ.ಎದುರುಗಡೆ
ಪ್ರತಿಭಟನೆಯನ್ನುದ್ದೇಶಿಸಿ ಅಜಿತ್ ಐವರ್ನಾಡು ,ಅಶೋಕ್ ಎಡಮಲೆ,ನೆಕ್ರೆಪ್ಪಾಡಿ ಕೃಷ್ಣಪ್ಪ ಗೌಡ,ಪದ್ಮಕೋಲ್ಚಾರ್,ಶ್ರೀನಿವಾಸ ಮಡ್ತಿಲರವರು ಮಾತನಾಡಿ ಧಾರ್ಮಿಕ ಸ್ಥಳಕ್ಕೆ ಹೋಗುವ ರಸ್ತೆ ತೀರಾ ಹೊಂಡ ಗುಂಡಿಗಳಿಂದ ಕೂಡಿದೆ.ಜನಪ್ರತಿನಿಧಿಗಳು ರಸ್ತೆ ಅಭಿವೃದ್ಧಿಗೆ ಲಕ್ಷ,ಕೋಟಿಯ ಆಶ್ವಾಸನೆ ನೀಡಿದ್ದಾರೆ .ಆದರೆ ಇಲ್ಲಿಯವರೆಗೆ ಯಾವುದೇ ರೀತಿಯ ರಸ್ತೆ ಅಭಿವೃದ್ದಿ ಮಾಡಿಲ್ಲ ಎಂದು ಹೇಳಿದರು.ನಾವು ಯಾವುದೇ ರಾಜಕೀಯ ಪಕ್ಷದ ವಿರುದ್ಧ ಪ್ರತಿಭಟನೆ ನಡೆಸುತ್ತಿಲ್ಲ.ನಮ್ಮ ಧಾರ್ಮಿಕ ಕೇಂದ್ರಕ್ಕೆ ಹೋಗುವ ರಸ್ತೆಯ ಅಭಿವೃದ್ಧಿಗೆ ಮಾತ್ರ ಪ್ರತಿಭಟನೆ ನಡೆಸುತ್ತೇವೆ.
ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತದೆ.ಶಾಲಾ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಇವತ್ತಿನ ಪ್ರತಿಭಟನೆ ಕೇವಲ ಸಾಂಕೇತಿಕ ಪ್ರತಿಭಟನೆ .
ದೇವಸ್ಥಾನದ ಜಾತ್ರೆ ಕಳೆಯುವಷ್ಟರಲ್ಲಿ ರಸ್ತೆ ಅಭಿವೃದ್ಧಿಯಾಗಬೇಕು.
ಇಲ್ಲವಾದರೆ ಮುಂದೆ ಮುಖ್ಯ ರಸ್ತೆ ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.


ಪ್ರತಿಭಟನೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು.
ಪ್ರತಿಭಟನೆ ಆಗಮಿಸಿದ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆಯವರು ಮನವಿ ಸ್ವೀಕರಿಸಿದರು.
ಇವರ ಮುಖಾಂತರ ತಹಶೀಲ್ದಾರರಿಗೆ,ಜಿಲ್ಲಾಧಿಕಾರಿಗಳಿಗೆ ಹಾಗೂ ಸರಕಾರಕ್ಕೆ ರಸ್ತೆ ಅಭಿವೃದ್ಧಿಪಡಿಸುವ ಬಗ್ಗೆ ಮನವಿ ನೀಡಿದರು.ಬಳಿಕ ಪ್ರತಿಭಟನೆ ಕೊನೆಗೊಂಡಿತು.