ಜ. 25: ಕೊಡಿಯಾಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿಯಿಂದ ನಗರ ಭಜನೆಗೆ ಚಾಲನೆ

0

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ಕಲ್ಲಗದ್ದೆ, ಕೊಡಿಯಾಲ ಇದರ 49 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯುವ ನಗರ ಭಜನಾ ಕಾರ್ಯಕ್ರಮಕ್ಕೆ ಜ. 25ರಂದು ಚಾಲನೆ ದೊರೆಯಲಿದೆ.
ಜ. 25ರಂದು ಸಂಜೆ 6.00 ಗಂಟೆಗೆ ಬೆಳ್ಳಾರೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಶ್ರೀರಾಮ ಪಾಟಾಜೆ ಜ್ಯೋತಿ ಬೆಳಗಿಸಲಿದ್ದಾರೆ. ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಬೆಳ್ಳಾರೆ ವಲಯ ಮೇಲ್ವಿಚಾರಕ ಗೋಪಾಲಕೃಷ್ಣ ಎನ್. ನಗರ ಭಜನೆಗೆ ಚಾಲನೆ ನೀಡಲಿದ್ದಾರೆ. ಹಲವು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಾ. 2ರಂದು ನಗರ ಭಜನೆ ಮುಕ್ತಯಗೊಂಡು, ಸತ್ಯನಾರಾಯಣ ಪೂಜೆ, ಸಂಜೆ 6ರಿಂದ ಬೆಳಿಗ್ಗೆ ತನಕ ಭಜನೆ, ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಭಜನಾ ಮಂಡಳಿ ಅಧ್ಯಕ್ಷ ಬಾಚೋಡಿ ವೆಂಕಟೇಶ ಪೈ ಕೊಡಿಯಾಲ ತಿಳಿಸಿದ್ದಾರೆ.