ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹದ ಪ್ರಾಣಪ್ರತಿಷ್ಠೆ ಹಿನ್ನೆಲೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇಗುಲದಲ್ಲಿ ವಿಶೇಷ ಪೂಜೆ

ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹದ ಹಿನ್ನೆಲೆಯಲ್ಲಿ ಜ.22ರಂದು ಮಧ್ಯಾಹ್ನ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇಗುಲದಲ್ಲಿ ವಿಶೇಷ ಪೂಜೆಯು ಜ.22ರಂದು ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ನೀಲಕಂಠ ಶಾಸ್ತ್ರಿ ಅವರ ನೇತೃತ್ವದಲ್ಲಿ ಶ್ರೀ ಮಹಾವಿಷ್ಣು ದೇವರಿಗೆ ಮಧ್ಯಾಹ್ನ ವಿಶೇಷ ಮಹಾಪೂಜೆ ಜರುಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.