ಶ್ರೀ ರಾಮಲಲ್ಲ ಪ್ರಾಣ ಪ್ರತಿಷ್ಠೆ ಹಿನ್ನಲೆ: ಎಡಮಂಗಲ ದೇವಸ್ಥಾನದಲ್ಲಿ ಕರಸೇವಕರಿಗೆ ಗೌರವಾರ್ಪಣೆ

0

ಅಯೋಧ್ಯೆ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಹಿನ್ನಲೆಯಲ್ಲಿ ಜ.22 ರಂದು ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಳದ ಸಾನಿಧ್ಯದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸಾನಿಧ್ಯದಲ್ಲಿ ವಿಶೇಷ ಪ್ರಾರ್ಥನೆ ಬಳಿಕ ಶಿವ ಪಾರ್ವತಿ ಸಭಾಭವನದಲ್ಲಿ ಸಾಮೂಹಿಕ ಶ್ರೀ ರಾಮ ತಾರಕ ಮಂತ್ರ ಜಪ ಹಾಗೂ ಕುಣಿತ ಭಜನೆ ನಡೆಯಿತು.


ಕರೆ ಸೇವಕರಾದ ಈಶ್ವರ ಜಾಲ್ತಾರು ದಂಪತಿಗಳು ಮತ್ತು ಕೇರ್ಪಡ ಗಂಗಾಧರ ಪಂಡಿತ್ ರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆಯು ಇದೇ ಸಂದರ್ಭದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಸದಸ್ಯರು ಹಾಗೂ ಭಕ್ತಾದಿಗಳು, ವಿಶ್ವ ಹಿಂದೂ ಪರಿಷತ್, ಬಜರಂಗದಳ ಎಡಮಂಗಲ ಘಟಕ ,ಕಡಬ ಪ್ರಖಂಡದ ಅಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸದಸ್ಯರುಗಳು ಭಾಗವಹಿಸಿದ್ದರು.