ಸರಕಾರದ ಯೋಜನೆಗಳಿಂದ ಪಕ್ಷ ಪ್ರಯೋಜನ ಪಡೆಯಲು ಕಾರ್ಯಕರ್ತರು ಶ್ರಮ ವಹಿಸಬೇಕು

0

ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಿಂದ ಪಕ್ಷ ಪ್ರಯೋಜನ ಪಡೆಯಲು ಕಾರ್ಯಕರ್ತರು ಶ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಸುಳ್ಯಕ್ಕೆ ಆಗಮಿಸಿದ್ದ ಸಚಿವರು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಖಂಡಿತವಾಗಿಯೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣವಿರುತ್ತದೆ ಎಂದು ಹೇಳಿದ ಸಚಿವರು, ಕೇಂದ್ರ ಸರಕಾರ ಕರ್ನಾಟಕವನ್ನು ಕಡೆಗಣಿಸಿ ಅನ್ಯಾಯ ಮಾಡುತ್ತಿದೆ. ರಾಜ್ಯಕ್ಕೆ ಅನುದಾನ ನೀಡುತ್ತಿಲ್ಲ. ಕರ್ನಾಟಕದ 27 ಬಿಜೆಪಿ ಎಂ.ಪಿ.ಗಳೂ ರಾಜ್ಯದ ಪರ ಮಾತನಾಡುತ್ತಿಲ್ಲ. ಇಂಥವರನ್ನು ಮತ್ತೆ ಮತ್ತೆ ಗೆಲ್ಲಿಸಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ಪ್ರೊ.ಕೆ.ಈ .ರಾಧಾಕೃಷ್ಣ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಂ, ಕಾಂಗ್ರೆಸ್ ಮುಖಂಡರಾದ ಧನಂಜಯ ಅಡ್ಪಂಗಾಯ, ಎಂ‌. ವೆಂಕಪ್ಪ ಗೌಡ, ಡಾ. ರಘು, ಟಿ.ಎಂ.ಶಹೀದ್ ಮೊದಲಾದವರು ಉಪಸ್ಥಿತರಿದ್ದರು.