ಎನ್ನೆಂಸಿ : ಗಣರಾಜ್ಯ ದಿನಾಚರಣೆ

0

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಜ. 26 ರಂದು ಆಚರಿಸಲಾಯಿತು.


ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷ ಡಾ. ಕೆ.ವಿ ಚಿದಾನಂದ ಧ್ವಜಾರೋಹಣಗೈದು ಮಾತನಾಡಿ ದೇಶ ಅಭಿವೃದ್ದಿ ಪಥದತ್ತ ಸಾಗುತ್ತಿರುವ ಸಂದರ್ಭ ಯುವಜನತೆ ಪಾತ್ರ ಮಹತ್ವವಾದದ್ದು. ರಾಷ್ಟೀಯ ಶಿಕ್ಷಣ ನೀತಿ ಮೂಲಕ ಕಲಿಕೆ ಮತ್ತು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯುತ್ತಿರುವುದರಿಂದ ಇನ್ನಷ್ಟು ಪ್ರಗತಿ ಸಾಧ್ಯ ಎನ್ನುತ್ತಾ 75ನೇ ವರ್ಷದ ಗಣರಾಜ್ಯ ದಿನದ ಶುಭಾಶಯಗಳನ್ನು ತಿಳಿಸಿದರು.


ವೇದಿಕೆಯಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಎಂ, ಪ್ರೊ. ಜವರೇ ಗೌಡ, ಪದವಿ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ಪದವಿ ಪೂರ್ವ ಪ್ರಾಂಶುಪಾಲೆ ಶ್ರೀಮತಿ ಮಿಥಾಲಿ ರೈ, ಚಂದ್ರಶೇಖರ್ ಪೇರಾಲು, ಮತ್ತಿತರರು ಉಪಸ್ಥಿತರಿದ್ದರು. ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು, ಕಾಲೇಜು ಎನ್ ಸಿ ಸಿ, ಎನ್‌.ಎಸ್.ಎಸ್, ರೇಂಜರ್ ಮತ್ತು ರೋವರ್ಸ್, ರೆಡ್ ಕ್ರಾಸ್ ವಿಭಾಗಗಳ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.