ಕೆವಿಜಿ ಪಾಲಿಟೆಕ್ನಿಕ್ : 75ನೇ ಗಣರಾಜ್ಯೋತ್ಸವ

0

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ 75 ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಸಂಸ್ಥೆಯ ಪ್ರಾಂಶುಪಾಲ ಜಯಪ್ರಕಾಶ್ ಕೆ ಧ್ವಜಾರೋಹಣ ಗೈದು ರಾಜ್ಯೋತ್ಸವದ ಸಂದೇಶ ನೀಡಿದರು.

ಉಪ ಪ್ರಾಂಶುಪಾಲ ಶ್ರೀಧರ್ ಎಂ ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ್ ಎಂ.ಎನ್ ಮತ್ತು ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎನ್. ಎಸ್. ಎಸ್ ಸ್ವಯಂಸೇವಕಿ ರಕ್ಷಿತಾ ಡಿ.ಎ ಸ್ವಾಗತಿಸಿ, ವೈಶಾಲಿ ವಂದಿಸಿದರು ಜೇಷ್ಮ ಎಸ್.ಬಿ ಕಾರ್ಯಕ್ರಮ ನಿರೂಪಿಸಿದರು.ದರ್ಶನ್ ಎಂ.ಪಿ ಕಮಾಂಡ್ ನೀಡಿದರು.