ಸಂಪಾಜೆ: ಚೈತನ್ಯ ವಿಮಾ ಯೋಜನೆಯಡಿ ಪರಿಹಾರ ವಿತರಣೆ

0

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಚೈತನ್ಯ ವಿಮಾ ಯೋಜನೆ ಅಡಿಯಲ್ಲಿ ಸುಳ್ಯ ತಾಲೂಕಿನ ಸಂಪಾಜೆ ವಲಯದ ಸ್ಫೂರ್ತಿ ನವೋದಯ ಸ್ವ ಸಹಾಯ ಸಂಘದ ಸದಸ್ಯರಾದ ಸ್ವಾತಿ ರವರಿಗೆ ಮಂಜೂರುಗೊಂಡ ವೈದ್ಯಕೀಯ ಪರಿಹಾರದ ಮೊತ್ತದ ಚೆಕ್ಕನ್ನು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ರವರು ವಿತರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್, ಸಂಪಾಜೆ ವಲಯದ ಪ್ರೇರಕರಾದ ಜಯಶ್ರೀ ಎಂ ಬಿ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.