ಗುತ್ತಿಗಾರು ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಭಾರತೀಯ ಸೈನ್ಯಕ್ಕೆ ಸೇರುವ ಬಗ್ಗೆ ಮಾಹಿತಿಯನ್ನು ನೀಡುವ ಕಾರ್ಯಕ್ರಮ

0

ಗುತ್ತಿಗಾರು ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಭಾರತೀಯ ಸೈನ್ಯಕ್ಕೆ ಸೇರುವ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡುವ ಕಾರ್ಯಕ್ರಮ ಇತ್ತೀಚೆಗೆ ಗುತ್ತಿಗಾರು ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾಜಿ ಸೈನಿಕ ಕ್ಯಾಪ್ಟನ್ ಸುದಾನಂದ ಮಾವಿನಕಟ್ಟೆಯವರು ಭಾಗವಹಿಸಿ ಮಾಹಿತಿ ನೀಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ.ಜಯರಾಮ ಕಡ್ಲಾರು  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗುತ್ತಿಗಾರು ಹೈಸ್ಕೂಲು ಮುಖ್ಯಗುರುಗಳಾದ ನೆಲ್ಸನ್ ಕ್ಯಾಸ್ಟಲಿನೋ  ಸ್ವಾಗತಿಸಿದರು. ಲಯನ್ಸ್ ಕಾರ್ಯಕ್ರಮ 'ಇನ್ಸ್ಪಯರ್ ಯೂತ್' ನ ಜಿಲ್ಲಾ ಸಂಯೋಜಕರಾದ ಪ್ರವೀಣ್ ಮುಂಡೋಡಿಯವರು ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿದರು. ಕ್ಲಬ್  ಉಪಾದ್ಯಕ್ಷ ನವೀನ್ ಬಾಳುಗೋಡು   ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಸೈನ್ಯಕ್ಕೆ ಸೇರುವ ಬಗ್ಗೆ ಮಾಹಿತಿ ತಿಳಿದುಕೊಂಡದ್ದಲ್ಲದೆ, ತಮಗಿದ್ದ ಸಂಶಯಗಳನ್ನು ನಿವಾರಿಸಿಕೊಂಡರು. ಕಾಲೇಜು ಮುಖ್ಯ ಶಿಕ್ಷಕರಾದ ಚೆನ್ನಮ್ಮ ಮೋಹನ್  ಧನ್ಯವಾದಗೈದರು.  ಶಿಕ್ಷಕಿ ಪ್ರೀತಿ ರೈ ಕಾರ್ಯಕ್ರಮ ನಿರೂಪಿಸಿದರು.