ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲುಕು ಮಟ್ಟದ ಹಸ್ತಪ್ರತಿ ಸ್ಪರ್ಧೆ ಬಹುಮಾನ ವಿತರಣೆ

0

ಸುಳ್ಯ ತಾಲೂಕು ಕನ್ನಡ ಪರಿಷತ್ ಹಾಗು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ತಾಲುಕು ಮಟ್ಟದ ಪ್ರಾಥಮಿಕ ಹಾಗು ಪ್ರೌಢಶಾಲೆ ಗಳಿಗೆ ಏರ್ಪಡಿಸಿದ ಶಾಲಾ ಹಸ್ತಪ್ರತಿ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಕಾರ್ಯಕ್ರಮವು ಫೆ. 12 ರಂದು ಅಪರಾಹ್ನ 2.30ಕ್ಕೆ ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಇಲ್ಲಿ ನಡೆಯಲಿದೆ. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ. ಇ. ಇವರು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶೀತಲ್ ಯು ಕೆ ಇವರು ಭಾಗವಹಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೆರಾಲು ಇವರು ವಹಿಸಲಿದ್ದಾರೆ. ಸ್ಪರ್ದೆಯಲ್ಲಿ ಭಾಗವಹಿಸಿದ ಶಿಕ್ಷಕರು ಹಾಗು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.