ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರು ಹಾಗೂ ಪರಿವಾರ ದೇವರುಗಳ ಪ್ರತಿಷ್ಠಾ ದಿನ ಹಾಗೂ ವರ್ಷಾವಧಿ ಜಾತ್ರೋತ್ಸವಕ್ಕೆ ಫೆ.12ರಂದು ಬೆಳಿಗ್ಗೆ ಮುಹೂರ್ತದ ಗೊನೆ ಕಡಿಯಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ರಜತ್ ಅಡ್ಕಾರು, ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಸೇರಿದಂತೆ ಉತ್ಸವ ಸಮಿತಿಯ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು, ವಿವಿಧ ಬೈಲುವಾರು ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.