ಸುಬ್ರಹ್ಮಣ್ಯ: ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನಿಂದ ರಸ್ತೆ ಬದಿಗಳಲ್ಲಿ ಸ್ವಚ್ಛತಾ ಕಾರ್ಯ

0

ಸುಬ್ರಹ್ಮಣ್ಯದಲ್ಲಿ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಾ ಇರುವುದು ಸಾಮಾನ್ಯವಾಗಿರುವಂತೆಯೇ. ಇದೀಗ ನಿರಂತರವಾಗಿ ಕ್ಷೇತ್ರದ ಮುಖ್ಯ ರಸ್ತೆಗಳ ಇಕ್ಕಲಗಳಲ್ಲಿ ಸಾಕಷ್ಟು ತ್ಯಾಜ್ಯ ವಸ್ತುಗಳು ಹಾಗೂ ಕಸ ವಸ್ತುಗಳು ಬಿದ್ದಿರುತ್ತವೆ. ಇದನ್ನು ಮನಗಂಡ ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಫೆ‌.11 ರಂದು ಕುಮಾರಧಾರ ಸ್ನಾನ ಘಟ್ಟದ ಸುತ್ತಮುತ್ತಲಿನ ಪರಿಸರದಲ್ಲಿರುವಂತಹ ಕಸಕಡ್ಡಿ, ಪ್ಲಾಸ್ಟಿಕ್ ಬಾಟಲಿಗಳು, ಆಹಾರದ ಪಟ್ಟಣಗಳು ಇತರ ಕಚ್ಚ ವಸ್ತುಗಳನ್ನು ಸ್ವಚ್ಛಗೊಳಿಸಿ ಸ್ವಚ್ಛತೆಯನ್ನು ಕೈಗೊಂಡರು.

ಎಲ್ಲೆಡೆ ಕಸ ಹಾಕುತ್ತಿರುವುದು ಕಂಡು ಬರುತ್ತಿರುವುದನ್ನು ಮನಗಂಡ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾl ರವಿ ಕಕ್ಕೆ ಪದವು ಅವರ ಮಾರ್ಗದರ್ಶನದಲ್ಲಿ ಸ್ವಚ್ಚತಾ ಕಾರ್ಯಕ್ರಮದ ನಾಯಕ ಶರಣಪ್ಪ ರವರ ನೇತೃತ್ವದಲ್ಲಿ ಸ್ವಚ್ಛತೆಯನ್ನು ಕೈಗೊಳ್ಳಲಾಯಿತು.