ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಸುವರ್ಣ ಮಹೋತ್ಸವಕ್ಕೆ ಚಾಲನೆ

0

ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಸುವರ್ಣ ಮಹೋತ್ಸವವು ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನದೊಂದಿಗೆ ಪ್ರಾರಂಭಗೊಂಡಿತು. ಬಳಿಕ ಹಸಿರುವಾಣಿ ಸಮರ್ಪಣೆಯಾಗಿ ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಿತು.

ಕುಕ್ಕೆಶ್ರೀ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಗಮಿಸಿ ನೂತನ ಮಂದಿರದ ಕಚೇರಿಯನ್ನು ಉದ್ಘಾಟಿಸಿದರು. ಸ್ವಾಮೀಜಿಯವರನ್ನು ಪೂರ್ಣ ಕುಂಭ ಸ್ವಾಗತ ದೊಂದಿಗೆ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿ‌ ಗೌರವಾಧ್ಯಕ್ಷರು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು , ಸದಸ್ಯರು ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.