ಸುಬ್ರಹ್ಮಣ್ಯದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಶಿವಪ್ರಸಾದ ನಡುತೋಟ

0

ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಎದುರು ಫೆ.12 ರಂದು ನಡೆದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿರುದ್ಧ ಕಾಂಗ್ರೆಸ್ಸಿಗರು ನಡೆಸಿದ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು ಹಾಸ್ಯಾಸ್ಪದವಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನವನ್ನು ನೀಡದೆ ನಮ್ಮ ಗ್ರಾಮ ಪಂಚಾಯತ್ ಅಭಿವೃದ್ಧಿಯನ್ನು ಸಹಿಸಲಾಗದೆ ಈ ರೀತಿ ಪ್ರತಿಭಟನೆ ಮಾಡುವುದನ್ನು ಭಾರತೀಯ ಜನತಾ ಪಾರ್ಟಿ ಸುಬ್ರಹ್ಮಣ್ಯ ಗ್ರಾಮ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಿಂದೆ ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪನವರು ರೂ.180 ಕೋಟಿ ಅನುದಾನವನ್ನು ಮಾಸ್ಟರ್ ಪ್ಲಾನ್ ಗಾಗಿ ದೇವಳದ ಹಾಗೂ ನಮ್ಮ ಗ್ರಾಮ ಪಂಚಾಯಿತಿನ ಪ್ರಮುಖ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿದ್ದು, ಮುಂದೆ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ಕೆ ಮುಂದಿನ ಪ್ಲಾನ್ ಅನ್ನು ಈಗಿನ ಸಮಿತಿ ರಚಿಸಿಕೊಂಡಿದ್ದು, ಮುಂದುವರಿದ ಕಾರ್ಯ ಯೋಜನೆ ನಡೆಯುತ್ತಿದೆ. ಇದನ್ನು ಸಹಿಸಲಾಗದ ಕೆಲ ಕಾಂಗ್ರೆಸಿನವರು ಈ ರೀತಿ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ.

ಮುಂದೆಯೂ ಅಭಿವೃದ್ಧಿ ಕಾರ್ಯಗಳನ್ನು ತಮ್ಮ ಭಾಜಪ ಬೆಂಬಲಿತ ಗ್ರಾಮ ಪಂಚಾಯಿತಿ ಅಡಿಯಲ್ಲಿ ಮಾಡಲಿದೆ ಎಂದು ಭಾಜಪ ಮಹಾ ಶಕ್ತಿ ಕೇಂದ್ರ ಸುಬ್ರಹ್ಮಣ್ಯದ ಅಧ್ಯಕ್ಷ ಶಿವಪ್ರಸಾದ ನಡುತೋಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.