ಬೆಳ್ಳಾರೆ : ಸಂವಿಧಾನ ಜಾಗೃತಿ ಜಾಥಕ್ಕೆ ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಸ್ವಾಗತ

0

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಸಂವಿಧಾನದ ಮೌಲ್ಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯ ಸರಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ರಥವು ಕೊಡಿಯಾಲದಿಂದ ಬೆಳ್ಳಾರೆ ಗೆ ಆಗಮಿಸಿದಾಗ ಜ್ಞಾನಗಂಗಾ ಶಾಲಾ ಬಳಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಸ್ವಾಗತಿಸಲಾಯಿತು.
ಬಳಿಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಮಾಲಾರ್ಪಣೆ ಮಾಡಿ ಸಂವಿಧಾನ ಪೀಠಿಕೆಯನ್ನು ವಾಚಿಸಿದರು.


ಜಿಲ್ಲಾ ಸಮಿತಿ ಸದಸ್ಯರಾದ ವಿಶ್ವನಾಥ ಅಲೆಕ್ಕಾಡಿ ಸ್ವಾಗತಿಸಿದರು.ಶೀನ ಬಾಳಿಲ ವಂದಿಸಿದರು.
ಬಳಿಕ ಬೆಳ್ಳಾರೆ ಪೇಟೆವರೆಗೆ ಬೈಕಿನಲ್ಲಿ ಸಾಗಿದರು.ಈ ಸಂದರ್ಭದಲ್ಲಿ ಕಾಲನಿಯ ನಿವಾಸಿಗಳು ಉಪಸ್ಥಿತರಿದ್ದರು