ಅಡ್ಕಾರು: ಅಂಜನಾದ್ರಿ ಪ್ರಸನ್ನಾಂಜನೇಯ ಸ್ವಾಮಿ ದೇವರ ಕಾಲಾವಧಿ ಜಾತ್ರಾಮಹೋತ್ಸವಕ್ಕೆ ಗೊನೆ ಮುಹೂರ್ತ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಕಾಲಾವಧಿ ಜಾತ್ರಾಮಹೋತ್ಸ ವವು ಫೆ.26ರಿಂದ 28ರವರೆಗೆ ಜರುಗಲಿದ್ದು, ಫೆ.19ರಂದು ಮಹೂರ್ತದ ಗೊನೆ ಕಡಿಯಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್, ಆಡಳಿತ ಸಮಿತಿ ಅಧ್ಯಕ್ಷ ಶಿವರಾಮ ರೈ ಕುರಿಯ, ಕೋಶಾಧಿಕಾರಿ ಜಯಂತ ಗೌಡ ಅಡ್ಕಾರು, ಆಡಳಿತ ಸಮಿತಿ ಪದಾಧಿಕಾರಿಗಳಾದ ಸೀತಾರಾಮ ಗೌಡ ಆಲಂಕಲ್ಯ, ಕೃಷ್ಣ ಕುಮಾರ್ ಅಡ್ಕಾರು, ನಾರಾಯಣ ಕಜೆಗದ್ದೆ ಸೇರಿದಂತೆ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.