ಹರಿಹರ ಪಲ್ಲತಡ್ಕದಲ್ಲಿ ಸಂವಿಧಾನ ಜಾಗೃತಿ ಜಾಥ

0

ಗ್ರಾ.ಪಂ ಆಡಳಿತದಿಂದ, ಸ್ವಾಗತ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ

ಸಂವಿಧಾನದ ಮೌಲ್ಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ರಥವು ಹರಿಹರ ಪಲ್ಲತಡ್ಕ ಗ್ರಾಮಕ್ಕೆ ಫೆ.21 ರಂದು ಆಗಮಿಸಿದಾಗ ಪಂಚಾಯತ್ ವತಿಯಿಂದ ಸ್ವಾಗತಿಸಲಾಯಿತು.


ಬಳಿಕ ಮೆರವಣಿಗೆ ಮೂಲಕ ಸಾಗಿ ಗ್ರಾ.ಪಂ ಗೆ ತೆರಳಲಾಯಿತು. ಅಲ್ಲಿ ಸಂವಿಧಾನ ಜಾಗೃತಿ ಜಾಥಾದ ಪ್ರತಿಜ್ಞೆ ಮಾಡಲಾಯಿತು.
ಗ್ರಾ.ಪಂ ಅಧ್ಯಕ್ಷೆ ವಿಜಯ ಕುಮಾರ್ ಅಂಙಣ, ಉಪಾಧ್ಯಕ್ಷ ಜಯಂತ ಬಾಳುಗೋಡು, , ನೋಡೆಲ್ ಅಧಿಕಾರಿ ಮಂಜುನಾಥ್, ಸ್ಥಳೀಯ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾ.ಪಂ ಸದಸ್ಯರು, ಗ್ರಾ.ಪಂ ವ್ಯಾಪ್ತಿಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.